ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ದೇಶದ ರೈತರಿಗೆ ಆರ್ಥಿಕ ಬೆಂಬಲವನ್ನು ನೀಡುತ್ತಿದೆ. ಈ ಯೋಜನೆಯಡಿ, ಸರ್ಕಾರವು ದೇಶದ ಎಲ್ಲಾ ರೈತರಿಗೆ ವಾರ್ಷಿಕ ₹6,000/- ಹಣವನ್ನು ತಲಾ ₹2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ ವಿತರಿಸುತ್ತಿದೆ.

ಇದುವರೆಗೆ 17ನೇ ಕಂತು ಬಿಡುಗಡೆ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಈ ವರ್ಷ ಜೂನ್ನಲ್ಲಿ ಬಿಡುಗಡೆ ಮಾಡಿದ್ದು, 9.3 ಕೋಟಿ ರೈತರು ಈ ಪ್ರಯೋಜನವನ್ನು ಪಡೆದಿದ್ದಾರೆ. ಅಂದಾಜು ₹20,000 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಈ ಯೋಜನೆಯಡಿ ಬಿಡುಗಡೆ ಮಾಡಿದೆ. ಇದೀಗ, ರೈತರು 18ನೇ ಕಂತಿನ ನಿರೀಕ್ಷೆಯಲ್ಲಿ ಇದ್ದಾರೆ, ಇದು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಗುವ ಸಾಧ್ಯತೆಯಿದೆ.
18ನೇ ಕಂತು ಪಡೆಯಲು ಈ-ಕೆವೈಸಿ ಅತ್ಯಗತ್ಯ: 18ನೇ ಕಂತಿನ ಹಣವನ್ನು ಪಡೆಯಲು, ರೈತರು ಈ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಈ ಪ್ರಕ್ರಿಯೆಯನ್ನು ಪಿಎಂ ಕಿಸಾನ್ ಪೋರ್ಟಲ್ನಲ್ಲಿ ಓಟಿಪಿ ಆಧಾರಿತವಾಗಿ ಮಾಡಬಹುದಾಗಿದೆ. ಬಯೋಮೆಟ್ರಿಕ್ ಆಧಾರದ ಮೇಲೆ ಈ-ಕೆವೈಸಿಗಾಗಿ ಹತ್ತಿರದ ಸಿಎಸ್ಸಿ ಕೇಂದ್ರವನ್ನು ಸಂಪರ್ಕಿಸಬಹುದು. ಈ ಪ್ರಕ್ರಿಯೆ ಇಲ್ಲದಿದ್ದರೆ, ರೈತರು 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಹರಾಗಲು ಈ ಅಂಶಗಳು ಮುಖ್ಯ:
- ಭೂ ಮಾಲೀಕತ್ವದ ದಾಖಲೆಗಳು ಸ್ಪಷ್ಟವಾಗಿರಬೇಕು.
- ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.
- ಆಧಾರ್ ನಂಬರ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಮಾಡಬೇಕು.
- NPCI (ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್) ಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡುವುದು ಅಗತ್ಯ.
ಹೆಚ್ಚಿನ ಮಾಹಿತಿ ಮತ್ತು ಸಹಾಯವಾಣಿ:
- ರೈತರು ಪಿಎಂ ಕಿಸಾನ್ ಪೋರ್ಟಲ್ ಮೂಲಕ ಫಲಾನುಭವಿಗಳ ಪಟ್ಟಿಯನ್ನು ತಪಾಸಿಸಬಹುದು.
- ಅಲ್ಲಿ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್, ಮತ್ತು ಹಳ್ಳಿಯ ವಿವರಗಳನ್ನು ನೀಡಿ ಫಲಾನುಭವಿಗಳ ಪಟ್ಟಿಯನ್ನು ನೋಡಬಹುದು.
- ಸಹಾಯವಾಣಿ ಸಂಖ್ಯೆ: 155261 ಅಥವಾ 011-24300606 ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಈ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ:
PM Kisan Samman Nidhi
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಿಗೆ ಆರ್ಥಿಕವಾಗಿ ನೆರವಾಗಲು ರೂಪುಗೊಂಡಿರುವ ದೊಡ್ಡ ಯೋಜನೆಯಾಗಿದೆ. ರೈತರು ತಮ್ಮ ಈ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, 18ನೇ ಕಂತಿನ ಹಣವನ್ನು ಸುಲಭವಾಗಿ ಪಡೆಯಬಹುದು.