ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಮಾಡಿ ಎಪಿಎಲ್ ಕಾರ್ಡ್ಗಳಾಗಿ ಬದಲಾವಣೆ ಮಾಡುವ ಕಾರ್ಯ ಮುಂದುವರಿದಿದ್ದು, ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಯೋಜನೆಯ ರೂ 2,000 ಸಹಾಯಧನ ಪ್ರತಿ ತಿಂಗಳು ಸಿಗುತ್ತದೆಯಾ? ಎಂಬ ಪ್ರಶ್ನೆ ಹಲವಾರು ಜನರಲ್ಲಿ ಉದ್ಭವಿಸಿದೆ. ಈ ಕುರಿತು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದುವಾದ ಫಲಾನುಭವಿಗಳಿಗೆ ಹಣ ದೊರೆಯುತ್ತದೆಯಾ?
ಸಚಿವೆಯ ಮಾಹಿತಿ ಪ್ರಕಾರ, ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯುತ್ತಾರೆ. ಆದರೆ, ಆದಾಯ ತೆರಿಗೆ ಪಾವತಿದಾರರು (Income Tax Payers) ಈ ಯೋಜನೆಯ ಸಹಾಯಧನ ಪಡೆಯಲು ಅರ್ಹರಾಗುವುದಿಲ್ಲ. ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ಗಳು ರದ್ದುಮಾಡಿ ಎಪಿಎಲ್ ಕಾರ್ಡ್ ಆಗಿ ಬದಲಾಯಿಸಿದರೂ, ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯ ಪಾವತಿ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು?
ಫಲಾನುಭವಿಗಳು ತಮ್ಮ ಮೊಬೈಲ್ ಬಳಸಿ DBT Karnataka ಅಪ್ಲಿಕೇಶನ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಪಾವತಿ ವಿವರಗಳನ್ನು ಪರಿಶೀಲಿಸಬಹುದು:
- ಗೂಗಲ್ ಪ್ಲೇ ಸ್ಟೋರ್ ಮೂಲಕ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
- 12 ಅಂಕಿಯ ಆಧಾರ್ ಸಂಖ್ಯೆ ನಮೂದಿಸಿ, OTP ಬಳಸಿ ಲಾಗಿನ್ ಆಗಿ.
- ಲಾಗಿನ್ ಆಗಿದ ನಂತರ ಪಾವತಿ ಸ್ಥಿತಿಯನ್ನು Payment Status ವಿಭಾಗದಲ್ಲಿ ಪರಿಶೀಲಿಸಿ.
- ಪಾವತಿ ಯಾವ ತಿಂಗಳಿಗೆ ಜಮಾ ಆಗಿದೆ, UTR ನಂಬರ್ ಮತ್ತು ಬ್ಯಾಂಕ್ ವಿವರಗಳನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ:
ಗೃಹಲಕ್ಷ್ಮಿ ಯೋಜನೆಯ ಇನ್ನಷ್ಟು ವಿವರಗಳಿಗೆ DBT Karnataka ಆಪ್ ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಬಳಸಿ.
- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 2000 ಹಣ ಈ ದಿನ ಬಿಡುಗಡೆ, ಈ ರೀತಿ ನಿಮ್ಮ ಹೆಸರು ಚೆಕ್ ಮಾಡಿ - June 25, 2025
- ಇ-ಹಾಜರಾತಿ ಕಡ್ಡಾಯ: ಶಾಲಾ ಮಕ್ಕಳಿಗೆ ನವೀನ ತಂತ್ರಜ್ಞಾನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ! - June 25, 2025
- SSLC, ITI ಪಾಸಾದವರಿಗೆ ಸರ್ಕಾರಿ ಉದ್ಯೋಗ, ತಿಂಗಳಿಗೆ 29,200 ವರೆಗೆ ಸಂಬಳ..!! ಅರ್ಜಿ ಹೇಗೆ ಹಾಕಬೇಕು ಗೊತ್ತಾ? - June 25, 2025
Leave a Reply